![]() |
image source: yourdictionary |
ಡಾ. ಅಶೋಕ್. ಕೆ. ಆರ್.
ಯಾರಾದರೂ
ಎಡಪಂಥೀಯ – ಬಲಪಂಥೀಯ ಅಂತ ಮಾತನಾಡುವಾಗ, ವಾದ ಮಾಡುವಾಗ ನಿಜಕ್ಕೂ ಈಗ ನಮ್ಮಲ್ಲಿ ಎಡಪಂಥೀಯತೆ – ಬಲಪಂಥೀಯತೆ
ಅನ್ನುವುದಿದೆಯೇ ಎನ್ನುವ ಪ್ರಶ್ನೆ ನನ್ನಲ್ಲಿ ಮೂಡುತ್ತಲೇ ಇರುತ್ತದೆ. ಈ ರೀತಿಯಾಗಿ ಮಾತನಾಡುವ, ವಾದ
ಮಾಡುವ ನಾವೆಲ್ಲರೂ ಬಂಡವಾಳಶಾಹಿ – ಕ್ಯಾಪಿಟಲಿಸ್ಟುಗಳೇ ಅಲ್ಲವೇ ಎನ್ನುವ ಯೋಚನೆ ಸುಳಿಯುತ್ತದೆ. ಅಬ್ಬಬ್ಬಾ
ಅಂದರೆ ಒಂಚೂರು ಎಡಕ್ಕಿರುವ ಅಥವಾ ಒಂದಷ್ಟು ಬಲಕ್ಕಿರುವ ಕ್ಯಾಪಿಟಲಿಸ್ಟುಗಳಷ್ಟೇ ಅಲ್ಲವೇ ನಾವು ಬಹುತೇಕರು…
ನರಸಿಂಹರಾವ್ ಕಾಲದಲ್ಲಿ, ಮನಮೋಹನ್ ಸಿಂಗ್ರವರು ಹಣಕಾಸು ಸಚಿವರಾಗಿದ್ದಾಗಿನ ಸಮಯದಲ್ಲಿ ಇಂಡಿಯಾ ಜಾಗತೀಕರಣಕ್ಕೆ ಸಂಪೂರ್ಣವಾಗಿ ತೆರೆದುಕೊಂಡಿತು. ಹಲವು ವರುಷಗಳ ಕಾಲ ವಿಧವಿಧದ ವಿರೋಧಗಳನ್ನು ಈ ಹೊಸ ಆರ್ಥಿಕ ನೀತಿಗಳು ಎದುರಿಸಿತಾದರೂ ಅಂತಿಮವಾಗಿ ಕ್ಯಾಪಿಟಲಿಸಂ ಎನ್ನುವ ಸಿದ್ಧಾಂತವಲ್ಲದ ಸಿದ್ಧಾಂತ ಉಳಿದೆಲ್ಲ ಸಿದ್ಧಾಂತಗಳನ್ನು ಮೀರಿ ಜಯಿಸಲಾರಂಭಿಸಿತು ಎನ್ನುವುದು ತಿರಸ್ಕರಿಸಲಾಗದ ವಾಸ್ತವ.