ಹಿಂಗ್ಯಾಕೆ?
ಅರ್ಥ ಹುಡುಕುವ ಸಡಗರದಲ್ಲಿ ಬದುಕು ಕಳೆದುಹೋಗಿದೆ!
ಜೂನ್ 19, 2026
ಇಥೆನಾಲ್ ಮಿಶ್ರಿತ ಪೆಟ್ರೋಲಿನ ಸುತ್ತ...
ಜೂನ್ 18, 2026
ಕರಾವಳಿಯ ಕೋಮು ಗಲಭೆಗಳಲ್ಲಿ ಸತ್ತವರ ಕುಟುಂಬಗಳ ಕಣ್ಣೀರ ಕತೆಗಳು.
ಡಾ. ಅಶೋಕ್ ಕೆ ಆರ್
ನಾನು ಕನ್ನಡದಲ್ಲಿ ಓದಿದ ವಿಶಿಷ್ಟ ಪುಸ್ತಕಗಳಲ್ಲಿ "ಕರಾವಳಿಯ ರಕ್ತ - ಕಣ್ಣೀರು" ಪ್ರಮುಖ ಸ್ಥಾನವನ್ನೇ ಪಡೆಯುತ್ತದೆ.
ಮತಾಂಧರ ದ್ವೇಷದಿಂದ, ಧಾರ್ಮಿಕ ದ್ವೇಷದ ಕಾರಣದಿಂದ ಕೊಲೆಯೊಂದು ನಡೆದರೆ ಮುಖ್ಯವಾಹಿನಿ ವಾಹಿನಿಗಳಲ್ಲಿ ಸುದ್ದಿಯಾಗುತ್ತದೆ. ಕೊಲೆಯಾದವರ ಸಾಮಾಜಿಕ ಸ್ಥಾನಮಾನ, ರಾಜಕೀಯ ಹಿನ್ನೆಲೆ, ಅಪರಾಧಗಳ ಹಿನ್ನೆಲೆಯ ಆಧಾರದ ಮೇಲೆ ಸುದ್ದಿ ಮೊದಲ ಪುಟದಲ್ಲಿ ದೊಡ್ಡದಾಗಿ ಪ್ರಕಟವಾಗುತ್ತದೋ ಅಥವಾ ಎರಡು ಮೂರನೇ ಪುಟಗಳ ಸ್ಥಳೀಯ ಆವೃತ್ತಿಯಲ್ಲಿ ಪುಟ್ಟ ಕಾಲಂನಲ್ಲಿ ಪ್ರಕಟವಾಗುತ್ತದೋ ಎನ್ನುವುದು ನಿರ್ಧಾರವಾಗುತ್ತದೆ. ಟಿವಿಯಲ್ಲಿ ಹೆಚ್ಚು ಸಮಯ ಸುದ್ದಿಯಾಗಲು ಸಹ ಇದೇ ಮಾನದಂಡಗಳು ಅನ್ವಯ. ರಾಜಕೀಯ ಪಕ್ಷಗಳು ನೇರವಾಗಿ ಅಖಾಡಕ್ಕೆ ಧುಮುಕಿದರೆ ಮತ್ತೊಂದಷ್ಟು ದಿನಗಳ ಕಾಲ ಸುದ್ದಿಯ ಪ್ರಸಾರವಾಗುತ್ತದೆ.
ಜೂನ್ 4, 2026
ಸಿದ್ಧರಾಮಯ್ಯನವರೀಗ ಮಾಜಿ ಮುಖ್ಯಮಂತ್ರಿ.
ಡಾ. ಅಶೋಕ್. ಕೆ. ಆರ್
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ನಾ ಮತ ಚಲಾಯಿಸಲು ಪ್ರಮುಖ ಕಾರಣ ಸಿದ್ಧರಾಮಯ್ಯನವರು ಮತ್ತೊಮ್ಮೆ ಸಿಎಂ ಆಗಲಿ ಎಂದು.
ಮೇ 21, 2026
ಪುಸ್ತಕ ಪರಿಚಯ: The girl with seven names
ಡಾ ಅಶೋಕ್ ಕೆ ಆರ್
ಬಿಸಿಲೊತ್ತಿನಲ್ಲಿ ನಮ್ಮ ಮನೆಯ ಕಾಂಪೌಂಡಿನೊಳಗೆ ಅಪರಿಚಿತರು ನೆರಳು ಅರಸಿ ಬಂದರೆ ಮುನಿದು ರೇಗುವ ನಾವು ಅದೇ ತರಹ ಪಕ್ಕದ ಮನೆಯವರು ಯಾರ ಮೇಲೋ ರೇಗುತ್ತಿದ್ದರೆ "ಐದು ನಿಮಿಷ ನೆರಳಲ್ಲಿ ನಿಂತು ಹೋದರೆ ಇವರ ಗಂಟೇನು ಹೋಗ್ತದೆ" ಅಂತ ಪಕ್ಕದ ಮನೆಯವರ ಬಗ್ಗೆ ಗೊಣಗಿಕೊಳ್ಳುತ್ತೇವೆ!
ಈ ಯೋಚನೆ ಪದೇ ಪದೇ ತಲೆಯಲ್ಲಿ ಬಂದಿದ್ದು Hyeonseo lee (co author - David john) ಬರೆದಿರುವ The girl with seven names: A north korean defectors story ಓದುವಾಗ. ವಲಸೆಯನ್ನು ನಿಯಂತ್ರಿಸುವ ಕೆಲಸ ಎಷ್ಟೇ ನಡೆದರೂ ವಲಸೆಯನ್ನು ನೂರು ಪ್ರತಿಶತಃ ನಿಲ್ಲಿಸುವುದು ಯಾರ ಕೈಲೂ ಸಾಧ್ಯವಿಲ್ಲ. ಕುತೂಹಲಕ್ಕೆ, ಒಂದು ದಿನವೋ ಅಥವಾ ಒಂದು ವಾರದ ಮಟ್ಟಿಗೆಂದೋ ಸರ್ವಾಧಿಕಾರದ ಉತ್ತರ ಕೊರಿಯಾದಿಂದ ಚೀನಾಕ್ಕೆ ಭೇಟಿ ಕೊಡುವ Hyeonseo lee ಯ ಜೀವನಗಾಥೆಯಿದು. ಎಷ್ಟೋ ಕಲ್ಪಿತ ಕತೆಗಳಿಗಿಂತ ನಿಜಜೀವನದ ಘಟನೆಗಳೇ ರೋಚಕವಾಗಿರ್ತವೆ ಎನ್ನುವುದಕ್ಕೂ ಈ ಪುಸ್ತಕ ಒಂದು ಉದಾಹರಣೆಯಂತಿದೆ.
ಸರ್ವಾಧಿಕಾರದ ಆಡಳಿತ ಹೇಗಿರುತ್ತದೆ, ಜನರ ಮನಸ್ಸನ್ನು ಭಾವನೆಗಳನ್ನು ಹೇಗೆಲ್ಲಾ ನಿಯಂತ್ರಿಸುತ್ತಾರೆ, ಜನರನ್ನೇ ಒಬ್ಬರ ಮೇಲೊಬ್ಬರನ್ನು ಛೂ ಬಿಟ್ಟು ಹೇಗೆ ತಮ್ಮಧಿಕಾರವನ್ನು ಉಳಿಸಿಕೊಳ್ಳುತ್ತಾರೆ ಎನ್ನುವಂಶ ವಿವರವಾಗಿದೆ. ಉತ್ತರ ಕೊರಿಯಾ ಬಿಟ್ಟು ಹೊರಗೇ ಬರದವರಿಗೆ, ಸರಕಾರಿ ಮಾಹಿತಿಯನ್ನು ಬಿಟ್ಟು ಬೇರೇನನ್ನೂ ಕದ್ದು ಮುಚ್ಚಾದರೂ ತಿಳಿಯದೆ ಹೋದವರಿಗೆ ಇಡೀ ವಿಶ್ವದಲ್ಲಿ ಉತ್ತರ ಕೊರಿಯಾ ದೇಶವೇ ಸರ್ವಶ್ರೇಷ್ಠ ದೇಶ! ಇಂತಿರುವ ದೇಶದಲ್ಲಿರುವ ಶ್ರೇಣೀಕರಣ ವ್ಯವಸ್ಥೆಗೆ ಹುಟ್ಟು ಹಾಗು ಕುಟುಂಬದ ಹಿನ್ನೆಲೆ ಪ್ರಮುಖ ಕಾರಣ. ಆಡಳಿತಕ್ಕೆ ಎದುರಾಗಿನಿಂತು ಶ್ರೇಣೀಕರಣ ವ್ಯವಸ್ಥೆಯಲ್ಲಿ ಕೆಳಜಾರಬಹುದೇ ಹೊರತು ಮೇಲೇರುವುದು ಕಷ್ಟದ ಕೆಲಸ. ದೇಶದ ಕಾನೂನಿಗೆ ವಿರುದ್ಧವಾಗಿ ನಿಂತೂ ಜಾರದೆ ಉಳಿಯಲು ಭ್ರಷ್ಟಾಚಾರ ಸಹಾಯಕ. Shantaram ಕಾದಂಬರಿಯಲ್ಲಿ ಬರುವ Problem with corruption is it works fine ಎಂಬ ಮಾತುಗಳು ಎಲ್ಲಾ ದೇಶಕ್ಕೂ ಎಲ್ಲಾ ಕಾಲಕ್ಕೂ ಅನ್ವಯವಾಗುತ್ತದೆ.
ಮಧ್ಯಮ ಶ್ರೇಣಿಯಲ್ಲೇ ಇದ್ದ Hyeonseo Lee ಗೆ ಉತ್ತರ ಕೊರಿಯಾ ತೊರೆಯಲು ಹೆಚ್ಚಿನ ಕಾರಣಗಳೇನೂ ಇರಲಿಲ್ಲ. ಕದ್ದು ಮುಖ್ಯ ನೋಡಿದ ಟಿವಿಯ ಕಾರ್ಯಕ್ರಮಗಳಲ್ಲಿ ತೋರಿದ ಪ್ರಪಂಚವನ್ನೊಮ್ಮೆ ಕಾಣಬೇಕೆಂಬ ವಯೋಸಹಜ ಕುತೂಹಲ (ಆ ಕುತೂಹಲ ಕೂಡ ಉತ್ತರ ಕೊರಿಯಾದಲ್ಲಿ ಸಹಜವಲ್ಲ) ಹೀಗೆ ಒಮ್ಮೆ ಚೀನಾ ದೇಶ ಪ್ರವೇಶಿಸಿದ ಲೇಖಕಿಗೆ ಮತ್ತೆ ಪರ್ಮನೆಂಟಾಗಿ ಉತ್ತರ ಕೊರಿಯಾಗೆ ಹಿಂದಿರುಗುವ ಅವಕಾಶವೂ ಸಿಗುವುದಿಲ್ಲ, ಹಿಂದಿರುಗುವ ಆಸೆಯೂ ಉಳಿಯುವುದಿಲ್ಲ. ಚೀನಾದಲ್ಲಿ ಅಕ್ರಮವಾಸಿಯಾಗಿ ಪ್ರಾಂತ್ಯದಿಂದ ಪ್ರಾಂತ್ಯಕ್ಕೆ ತೆರಳುತ್ತಾ ನಕಲಿ ಐಡಿಗಳನ್ನು ಪಡೆದು ಅಲ್ಲಿಲ್ಲಿ ಕೆಲಸ ಮಾಡುತ್ತಾ ಶತ್ರು ದೇಶವಾದ ದಕ್ಷಿಣ ಕೊರಿಯಾಗೆ ವಲಸೆ ಹೋಗಿ ಅಲ್ಲಿನ ಪೌರತ್ವ ಪಡೆದು ತನ್ನ ಅಮ್ಮ ಮತ್ತು ತಮ್ಮನನ್ನು ಕೂಡ ಉತ್ತರ ಕೊರಿಯಾದಿಂದ ಪಾರು ಮಾಡಿ ದಕ್ಷಿಣ ಕೊರಿಯಾಗೆ ಕರೆಸಿಕೊಳ್ಳಬೇಕೆಂದು ನಿಶ್ಚಯಿಸುತ್ತಾಳೆ. ಲೇಖಕಿಯ ಆಸೆ ಈಡೇರುತ್ತದಾ ಇಲ್ಲವಾ ಎಂಬುದೇ ಪುಸ್ತಕದ ಮೂಲ ತಿರುಳು.
ಉತ್ತರ ಕೊರಿಯಾ ಶತ್ರು ದೇಶವಾದರೂ ಅಲ್ಲಿಂದ ತನ್ನಲ್ಲಿಗೆ ವಲಸೆ ಬರುವ ಜನರನ್ನು ದೂರ ತಳ್ಳದೆ ತನ್ನ ದೇಶದ ಪ್ರಜೆಗಳನ್ನಾಗಿಸುವ ದಕ್ಷಿಣ ಕೊರಿಯಾದ ನಡೆ ಶ್ಲಾಘನೀಯವೇ ಹೌದು. ದಿನದ ಸುದ್ದಿಗಳನ್ನು ಓದುವಾಗ ಚೀನಾದ ಪೂರ್ಣ ಬೆಂಬಲ ಉತ್ತರ ಕೊರಿಯಾಗಿದೆ ಎಂದು ಅನ್ನಿಸುತ್ತದೆ. ಆದರೆ ವಾಸ್ತವ ಆ ರೀತಿಯಿಲ್ಲ ಎನ್ನುವಂತಹ ಘಟನೆಗಳು ಪುಸ್ತಕದಲ್ಲಿ ದಾಖಲಾಗಿವೆ.
ವಲಸೆ ನಿಯಂತ್ರಿಸುವ ಸಲುವಾಗಿ ಬಿಗಿ ಕಾನೂನು ಇರುವ ದೇಶಗಳಲ್ಲೂ ಅಕ್ರಮವಾಗಿ ದೇಶದೊಳಗೆ ನುಸುಳುವವರಿಗೆ ಸಹಾಯ ಮಾಡುವ ಮಧ್ಯವರ್ತಿಗಳು ಎಲ್ಲಾ ದೇಶಗಳಲ್ಲೂ ಇದ್ದೇ ಇರುತ್ತಾರೆ. ನಮ್ಮ ಇಂಡಿಯಾದಲ್ಲೂ ಇದ್ದೇ ಇರುತ್ತಾರೆ. ದುಡ್ಡು ಪಡೆದು ವಿದೇಶಿಯರಿಗೆ ನಕಲಿ ದಾಖಲೆ ಮಾಡಿಕೊಡುವ ನಮ್ಮ ದೇಶದ ಮಧ್ಯವರ್ತಿಗಳ ಬಗ್ಗೆ ಕೋಪ ಸಿಟ್ಟು ಬರುವುದು ಸಹಜವೇ. ಪುಸ್ತಕ ಓದುವಾಗ ಅಲ್ಲಿ ಬರುವ ಮಧ್ಯವರ್ತಿಗಳ ಬಗ್ಗೆ ಈ ರೀತಿ ಕೋಪ ಸಿಟ್ಟಿನ ಭಾವನೆ ಬರದೆ ಹೆಂಗೋ ಒಂದು ಆ ಹೆಣ್ಮಗ ದಡ ಸೇರ್ಕಂಡ್ರೆ ಸಾಕು ಅಂತ ಹಾರೈಸುತ್ತಿರುತ್ತೀವಿ.
ಉದಾರ ಮನೋಭಾವ ಪಕ್ಕದ ಮನೆಯವರಲ್ಲಿ ಇರಬೇಕು ನಮ್ಮಲ್ಲಲ್ಲ!
ನವೆಂ 4, 2025
ಪಕ್ಷಿ ವೀಕ್ಷಣೆಯ ಫೀಲ್ಡ್ ಡೈರಿ ಭಾಗ 11: ಮೋದೂರು ಕೆರೆ
ಅಕ್ಟೋ 25, 2025
ಜಾತಿ ವ್ಯವಸ್ಥೆಯ ವಿಕಾರಗಳಿಗೆ ಕನ್ನಡಿ ಹಿಡಿಯುವ "ಹೆಬ್ಬುಲಿ ಕಟ್"
ಡಾ. ಅಶೋಕ್. ಕೆ. ಆರ್.
ಸಮಾಜದ ವಿಕಾರಗಳಿಗೆ ಕನ್ನಡಿ ಹಿಡಿಯುವ ಇಂತಹ ಚಿತ್ರಗಳನ್ನು "ಚೆನ್ನಾಗಿದೆ" "ಅದ್ಭುತವಾಗಿದೆ" ಎಂದು ಹೇಗೆ ಹೇಳುವುದು?
ಬಹಳ ದಿನಗಳಿಂದ ನೋಡಬೇಕೆಂದುಕೊಂಡಿದ್ದ ʼಹೆಬ್ಬುಲಿ ಕಟ್ʼ ಸಿನಿಮಾವನ್ನು ಇವತ್ತು ನೋಡಲು ಸಮಯವಾಯಿತು. ಹದಿಹರೆಯದ ಹುಡುಗನ ಹುಡುಗಿಯೆಡೆಗಿನ ವಯೋಸಹಜ ಆಕರ್ಷಣೆ, ಅದಕ್ಕಿಂತಲೂ ಹೆಚ್ಚಾಗಿ ಒಂದು ಚೆಂದದ ಹೇರ್ ಕಟ್ ಮಾಡಿಸಿಕೊಳ್ಳಬೇಕೆಂಬ ಚಡಪಡಿಕೆಯೇ ತಳಪಾಯವಾದ ಸಿನಿಮಾ ಲವಲವಿಕೆಯಿಂದ ನೋಡುಗರನ್ನು ನಗಿಸುತ್ತ ನಗಿಸುತ್ತ ಕೊನೆಗೆ ಬೇಸರಕ್ಕೆ, ಎಂತ ಮಾಡಿದರೂ ಸರಿ ಹೋಗದ ನಮ್ಮ ಸಮಾಜದ ಕುರಿತು ಅಸಹನೆ ಮೂಡಿಸಿಬಿಡುತ್ತದೆ. ಬೇಸರ - ಅಸಹನೆ ಮೂಡದೇ ಹೋದರೆ ಅದು ನಮ್ಮಲ್ಲಿರುವ ಜಾತಿ ಮೇಲ್ಮೆಯ ಸೂಚಕ.
ʼಹಿಂದೂ ನಾವೆಲ್ಲ ಒಂದುʼ ಎನ್ನುವ ಘೋಷಣೆ ಈ ಮುಂಚೆಗಿಂತಲೂ ಅತ್ಯುಗ್ರವಾಗಿ ಕೇಳಿಬರುತ್ತಿರುವ ಕಾಲಘಟ್ಟದಲ್ಲಿ ನಾವಿದ್ದೀವಿ. ಆ ಘೋಷಣೆ ಕೂಡ ಈ ಚಿತ್ರದ ಒಂದು ಪ್ರಮುಖ ಪಾತ್ರಧಾರಿ. ಜೊತೆಗೆ ಐದು ಸಲದ ನಮಾಜಿಗೆ ಕೂಡ ಚಿತ್ರದಲ್ಲೊಂದು ಕ್ಯಾಮಿಯೋ ಪಾತ್ರವಿದೆ.
ಅಕ್ಟೋ 24, 2025
ಪಕ್ಷಿ ವೀಕ್ಷಣೆಯ ಫೀಲ್ಡ್ ಡೈರಿ ಭಾಗ 10: ಕಿತನಾಮಂಗಲ ಕೆರೆ
ಸೆಪ್ಟೆಂ 11, 2025
ಪಕ್ಷಿ ವೀಕ್ಷಣೆಯ ಫೀಲ್ಡ್ ಡೈರಿ ಭಾಗ 9: ಮುತ್ತುರಾಯನ ಕೆರೆ
![]() |
| ಕವಲುಬಾಲದ ಚಿಟವ |







